’ಪ್ರಣತಿ’ ಬೆಳಗಲು ಪ್ರಾರಂಭವಾಗಿ ಸುಮಾರು ಹದಿನೆಂಟು ತಿಂಗಳು ಕಳೆದಿವೆ, ಈ ಅವಧಿಯಲ್ಲಿ ೩ ವಿಭಿನ್ನ ಕಾರ್ಯಕ್ರಮಗಳನ್ನ ಸಾಹಿತ್ಯ ಮತ್ತು ಸಂಸ್ಕೃತಿಯ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿದ ನಾವು ಮತ್ತೊಂದು ಹೊಸ ಕಾರ್ಯಕ್ರಮಕ್ಕೆ ಅಣಿಯಾಗಿ ಬಂದಿದ್ದೇವೆ. ಗಮಕ ಕಲೆಯನ್ನ ಇಂದಿನ ಪೀಳಿಗೆಗೆ ಪರಿಚಯಿಸುವ ಒಂದು ಪುಟ್ಟ ಪ್ರಯತ್ನವೆ ’ಗಮಕ ಸುಧಾ ಧಾರೆ’. ರಾಷ್ಟ್ರಕವಿ ಕುವೆಂಪು ವಿರಚಿತ “ಶ್ರೀ ರಾಮಯಣ ದರ್ಶನಂ” ಕಾವ್ಯದ ಶಬರಿಗಾದನು ಅಥಿತಿ ದಾಶರಥಿಯ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ಇದೆ ಶನಿವಾರ ಸಂಜೆ ೫ ಕ್ಕೆ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ನಡೆಯಲಿದೆ. ನಿಮ್ಮೆಲ್ಲರಿಗೂ ಪ್ರಣತಿಯ ವತಿಯಿಂದ ನಲ್ಮೆಯ ಸ್ವಾಗತ…. ತಪ್ಪದೆ ಬನ್ನಿ.

ಗಮಕದ ಬಗ್ಗೆ ಹೆಚ್ಚಿನ ಮಾಹಿತಿಗೆ…
http://en.wikipedia.org/wiki/Gamak
http://www.itcsra.org/alankar/gamak/gamak_index.html
http://www.gswift.com/article-2.html
http://www.gswift.com/article.pdf
0 Responses to “ಗಮಕ ಸುಧಾ ಧಾರೆ”