ಶ್ರೀನಿಧಿಯ ’ಹೂವು ಹೆಕ್ಕುವ ಸಮಯ’ ಕವನ ಸಂಕಲನ ಮತ್ತು ಸುಶ್ರುತನ ’ಹೊಳೆಬಾಗಿಲು’ ಲಲಿತ ಪ್ರಬಂಧ ಸಂಕಲನ ಈ ಎರಡು ಪುಸ್ತಕಗಳ ಬಿಡುಗಡೆ ಸಮಾರಂಭವನ್ನು ಮುಂದಿನ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ಪ್ರಣತಿ ಆಯೋಜಿಸಿದೆ. ಅಂದು ನಮ್ಮ ಜೊತೆ ಹಿರಿಯ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಇರುತ್ತಾರೆ. ನಿಮ್ಮೆಲ್ಲರ ಬರುವಿಕೆಗಾಗಿ ನಾವೆಲ್ಲರು ಕಾಯುತ್ತಿರುತ್ತೇವೆ.
